No Ads

ಅಬ್ದುಲ್ ರಹೀಮಾನ್ ಪ್ರಕರಣ; 15 ಮಂದಿಯ ವಿರುದ್ಧ ಎಫ್ಐಆರ್ ದಾಖಲು

ಜಿಲ್ಲೆ 2025-05-28 12:39:09 316
post

ಬಂಟ್ವಾಳದಲ್ಲಿ ಅಬ್ದುಲ್ ರಹೀಮಾನ್ ಪ್ರಕರಣಕ್ಕೆ ಸಂಬಂಧಿಸಿ 15 ಮಂದಿಯ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಗಾಯಗೊಂಡ ಕಲಂದರ್ ಶಫಿ ನೀಡಿರುವ ಮಾಹಿತಿ ಆಧಾರದ ಮೇಲೆ ನಿಸಾರ್ ಎಂಬವವರು ಕೊಟ್ಟ ದೂರಿನಡಿ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಆಗಿದೆ. ರಹೀಮಾನ್​ಗೆ ಪರಿಚಯಸ್ಥರಿಂದಲೇ ಅಟ್ಯಾಕ್ ಆಗಿದೆ ಎನ್ನಲಾಗಿದ್ದು, ಈ ಸಂಬಂಧ ದೀಪಕ್, ಸುಮಿತ್ ಸೇರಿ 15 ಜನರ ವಿರುದ್ದ ಎಫ್ಐಆರ್ ದಾಖಲಾಗಿದೆ.

ಬಿಎನ್​ಎಸ್​ 103 (ಕೊಲೆ), 109 (ಕೊಲೆಯತ್ನ) ಸೇರಿದಂತೆ ಹಲವು ಸೆಕ್ಷನ್​​ಗಳಡಿ ಕೇಸ್ ದಾಖಲಾಗಿದೆ. ಅಬ್ದುಲ್ ರಹೀಮಾನ್ ಮತ್ತು ಕಲಂದರ್ ಶಫಿ ಹೊಳೆ ಬದಿಯಿಂದ ಪಿಕ್ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿದ್ದರು. ಅದನ್ನು ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬುವವರ ಮನೆ ಬಳಿ ಇಳಿಸುತ್ತಿದ್ದರು.. ಈ ವೇಳೆ ದಾಳಿಯಾಗಿದೆ ಎನ್ನಲಾಗಿದೆ.

ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿಯಿಂದ ಏಕಾಏಕಿ ದಾಳಿಯಾಗಿದೆ. ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹೀಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್​​ಗಳೊಂದಿಗೆ ಯದ್ವಾ-ತದ್ವಾ ದಾಳಿ ಮಾಡಿದ್ದಾರೆ. ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿ ಆಗಿದ್ದಾರೆ. ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್​ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದ‌ರ್ ಶಾಫಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಿಸಿದ್ದ ಮಹಮ್ಮದ್ ನಿಸಾ‌ರ್ ಎಂಬವವರು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

No Ads
No Reviews
No Ads

Popular News

No Post Categories
Sidebar Banner
Sidebar Banner