No Ads

ಅಣ್ಣಮ್ಮನಿಗೆ ಮಡಿಲಕ್ಕಿ ಮತ್ತು ಸೀರೆ ಕೊಟ್ಟು ದಿನಕರ್ ತೂಗುದೀಪರ ಹರಕೆ ತೀರಿಸಿದ ದರ್ಶನ್ ವಿಜಯಲಕ್ಷ್ಮಿ

ಮನರಂಜನೆ 2025-04-11 12:25:31 265
post

ಮೆಜೆಸ್ಟಿಕ್​ನಲ್ಲಿರೋ ಅಣ್ಣಮ್ಮ ದೇವಿಗೆ ಪೂಜೆ ಸಲ್ಲಿಸಿದ್ದಾರೆ ದರ್ಶನ್​ ಪತ್ನಿ ವಿಜಯಲಕ್ಷ್ಮಿ ಅವರು ಇಂದು ಅಣ್ಣಮ್ಮ ದೇವಿ ದೇವಾಲಯಕ್ಕೆ ಭೇಟಿ ಕೊಟ್ಟಿದ್ದ ದರ್ಶನ್​ ಪತ್ನಿ ವಿಜಯಲಕ್ಷ್ಮಿ ಅವರು ಹರಕೆ ತೀರಿಸಿದ್ದಾರೆ.

ಈ ಹಿಂದೆ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದರು. ಆಗ ಸಹೋದರ ದಿನಕರ್ ತೂಗುದೀಪ ಅಣ್ಣಮ್ಮ ದೇವಾಸ್ಥಾನಕ್ಕೆ ಭೇಟಿ ಕೊಟ್ಟು ಪ್ರಾರ್ಥನೆ ವಿಶೇಷ ಪ್ರಾರ್ಥನೆ ಮಾಡಿಕೊಂಡಿದ್ದರಂತೆ. ಸದ್ಯ ಜಾಮೀನು ಪಡೆದು ದರ್ಶನ್ ಜೈಲಿನಿಂದ ಆಚೆ ಬಂದಿದ್ದಾರೆ. ಇದೀಗ ದಿನಕರ್ ತೂಗುದೀಪ ಅವರ ಆಸೆಯಂತೆ ವಿಜಯಲಕ್ಷ್ಮಿ ಅಣ್ಣಮ್ಮ ದೇವರ ಸನ್ನಿಧಿಗೆ ಬಂದಿದ್ದಾರೆ.

ದಿನಕರ್ ಪರವಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹರಕೆ ತೀರಿಸಿದ್ದಾರೆ.  ಬೆಳಗ್ಗೆ ಅಣ್ಣಮ್ಮ ದೇವಾಸ್ಥಾನಕ್ಕೆ ಭೇಟಿ ಕೊಟ್ಟಿದ್ದ ವಿಜಯಲಕ್ಷ್ಮಿ ದೇವಿಗೆ ವಿಶೇಷ ಅಭಿಷೇಕ ಮಾಡಿದ್ದಾರೆ. ಅಲ್ಲದೇ ಅಣ್ಣಮ್ಮನಿಗೆ ಮಡಿಲಕ್ಕಿ ಮತ್ತು ಸೀರೆ ಕೊಟ್ಟು ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

 

No Ads
No Reviews
No Ads

Popular News

No Post Categories
Sidebar Banner
Sidebar Banner