No Ads

ದೇವಸ್ಥಾನ ಉತ್ಸವದ ವೇಳೆ ರೊಚ್ಚಿಗೆದ್ದ ಆನೆಗಳು; 3 ಸಾವು, 12 ಜನರ ಸ್ಥಿತಿ ಗಂಭೀರ

ಜಿಲ್ಲೆ 2025-02-14 17:06:24 287
post

ಕೇರಳ ದೇವಸ್ಥಾನದ ಉತ್ಸವದಲ್ಲಿ ಎರಡು ಆನೆಗಳು ರೊಚ್ಚಿಗೆದ್ದು ಓಡಾಡಿದ್ದರಿಂದ ಮೂವರು ಮೃತಪಟ್ಟಿದ್ದು 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕೊಝಿಕೋಡ್‌ನ ಕೊಯಿಲಾಂಡಿಯ ಕುರುವಂಗಾಡ್‌ನಲ್ಲಿರುವ ಮಣಕುಲಂಗರ ದೇವಸ್ಥಾನದಲ್ಲಿ ಉತ್ಸವದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಮೃತರನ್ನು ಕುರುವಂಗಾಡ್ ಮೂಲದ ಲೀಲಾ, ಅಮ್ಮುಕುಟ್ಟಿ ಮತ್ತು ರಾಜನ್ ಎಂದು ಗುರುತಿಸಲಾಗಿದ್ದು ಗಾಯಾಳುಗಳನ್ನು ಕೊಯಿಲಾಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಪೈಕಿ 12 ಜನರ ಸ್ಥಿತಿ ಗಂಭೀರವಾಗಿದೆ. ಅವರನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ. ಏಳು ಮಹಿಳೆಯರು, ಓರ್ವ ಹುಡುಗಿ ಮತ್ತು ನಾಲ್ವರು ಪುರುಷರನ್ನು ಕೋಝಿಕೋಡ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.

ದೊಡ್ಡ ಶಬ್ದದೊಂದಿಗೆ ಪಟಾಕಿಗಳನ್ನು ಸಿಡಿಸಿದಾಗ ಈ ಘಟನೆ ಸಂಭವಿಸಿದೆ. ಪೀತಾಂಬರನ್ ಮತ್ತು ಗೋಕುಲ್ ಎಂಬ ಆನೆಗಳಿಂದ ಈ ಘಟನೆ ನಡೆದಿದೆ. ಪಟಾಕಿ ಪ್ರದರ್ಶನದ ಸದ್ದಿಗೆ ಹತ್ತಿರದ ಕಟ್ಟಡಗಳ ಛಾವಣಿಗಳು ಸಹ ಅಲುಗಾಡಿದವು. ಅಷ್ಟರಲ್ಲಿ ಒಂದು ಆನೆ ಒಳಗೆ ಬಂತು. ಈ ಆನೆ ಹತ್ತಿರದಲ್ಲಿ ನಿಂತಿದ್ದ ಮತ್ತೊಂದು ಆನೆಯ ಮೇಲೆ ದಾಳಿ ಮಾಡಿತು. ಮತ್ತು ನಂತರ ಎರಡು ಆನೆಗಳು ಮುಖಾಮುಖಿಯಾದವು. ಈ ವೇಳೆ ಭಯಭೀತರಾದ ಜನರು ಓಡಲು ಪ್ರಾರಂಭಿಸಿದಾಗ ಕಾಲ್ತುಳಿತವಾಗಿದೆ. ಆನೆ ದಾಳಿಯಿಂದ ದೇವಸ್ವಂ ಕಚೇರಿಗೆ ಹಾನಿಯಾಗಿದೆ.

No Ads
No Reviews
No Ads

Popular News

No Post Categories
Sidebar Banner
Sidebar Banner