No Ads

ಮಂತ್ರಾಲಯ ಮಠದಿಂದ ಭಾರತ ರಕ್ಷಣಾ ನಿಧಿಗೆ 25 ಲಕ್ಷ ದೇಣಿಗೆ

ಕರ್ನಾಟಕ 2025-05-13 13:50:38 127
post

ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ದೇಣಿಗೆ ಘೋಷಣೆ ಮಾಡಿದ್ದಾರೆ. ತಮ್ಮ 13ನೇ ಪಟ್ಟಾಭಿಷೇಕ ಮಹೋತ್ಸವದಲ್ಲಿ  ದೇಶದ ಕುರಿತು ಮಾತಾಡಿದ ಅವರು ದೇಶದಲ್ಲಿ ಅಶಾಂತಿ ಉಂಟಾಗಿದೆ, ತಾತ್ಕಾಲಿಕವಾಗಿ ಯುದ್ದ ವಿರಾಮ ದೊರಕಿದೆ ಎಂದ ಶ್ರೀಗಳು, ಮಂತ್ರಾಲಯ ಮಠದಿಂದ 25 ಲಕ್ಷ ರೂ ದೇಣಿಗೆ ನೀಡುತ್ತಿರೋದಾಗಿ ಘೋಷಣೆ ಮಾಡಿದ್ರು.

ರಾತ್ರಿ ಹಗಲು, ಮಳೆ-ಬಿಸಿಲು, ಪ್ರಾಣವನ್ನು ಲೆಕ್ಕಿಸದೇ ದೇಶದ ರಕ್ಷಣೆಗಾಗಿ ನಮ್ಮೆಲ್ಲ ಯೋಧರು ಶ್ರಮಿಸುತ್ತಿದ್ದಾರೆ. ಜಾಗೃತರಾಗಿ, ವಿವೇಚನಾ ಪೂರ್ವಕವಾಗಿ ದೇಶದ ಸಮಗ್ರತೆಗೆ, ರಕ್ಷಣೆ, ಭದ್ರತೆಗೆ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ದೇಶದಲ್ಲಿ ಅಶಾಂತಿ ಪರಿಸ್ಥಿತಿ ಹಿನ್ನೆಲೆ ಸರಳವಾಗಿ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದ ಶ್ರೀಗಳು ಹೇಳಿದ್ದಾರೆ.

ಭಕ್ತರಿಂದ ತುಲಾಭಾರ ಕಾರ್ಯಕ್ರಮ ನಡೆದ ಬಳಿಕ ಶ್ರೀಗಳು ಮಾತನಾಡಿದರು. ಈ ವೇಳೆ, ದೇಶದಲ್ಲಿ ಅಶಾಂತಿ ಉಂಟಾಗಿದೆ. ತಾತ್ಕಾಲಿಕವಾಗಿ ಯುದ್ಧ ವಿರಾಮ ದೊರಕಿದೆ. ರಾತ್ರಿ ಹಗಲು, ಮಳೆ, ಬಿಸಿಲು ಎನ್ನದೇ ಪ್ರಾಣವನ್ನೂ ಲೆಕ್ಕಿಸದೇ ದೇಶದ ರಕ್ಷಣೆಗಾಗಿ ನಮ್ಮೆಲ್ಲ ಯೋಧರು ಶ್ರಮಿಸುತ್ತಿದ್ದಾರೆ. ಜಾಗೃತರಾಗಿ, ವಿವೇಚನಾ ಪೂರ್ವಕವಾಗಿ ದೇಶದ ಸಮಗ್ರತೆಗೆ, ರಕ್ಷಣೆ, ಭದ್ರತೆಗೆ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ದೇಶದಲ್ಲಿ ಅಶಾಂತಿ ಪರಸ್ಥಿತಿ ಹಿನ್ನೆಲೆ ಸರಳವಾಗಿ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ದೇಶದ ಸೈನಿಕರ (Indian Army) ಹಾಗೂ ನಾಗರಿಕರ ರಕ್ಷಣೆ, ಸುರಕ್ಷತೆಗಾಗಿ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ವಿವಿಧ ವಿಶೇಷ ಪೂಜೆ, ಹೋಮ-ಹವನವನ್ನು ಸಹ ಈ ವೇಳೆ ನೆರವೇರಿಸಲಾಯಿತು.

No Ads
No Reviews
No Ads

Popular News

No Post Categories
Sidebar Banner
Sidebar Banner