No Ads

ಪ್ರಜ್ವಲ್ ರೇವಣ್ಣ ಕಣ್ಣೀರು; ಮಗನನ್ನು ಹೊರತರಲು ಅಮ್ಮ ಭವಾನಿ ಹೈಕೋರ್ಟ್ ಮೊರೆ..

ಕರ್ನಾಟಕ 2025-05-02 13:49:59 503
post

ಮಗನ ಜೈಲು ಸೇರಿರೋದನ್ನು ನೋಡಲಾಗದೆ ತಾಯಿ ಭವಾನಿ ರೇವಣ್ಣ, ಪ್ರಜ್ವಲ್ ಪರವಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಶುಕ್ರವಾರ ಆರಂಭವಾಗಲಿರುವ ಸಾಕ್ಷಿಗಳ ವಿಚಾರಣೆಗೆ ತಡೆ ನೀಡುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಹೊಸ ವಕೀಲರ ನೇಮಕಕ್ಕೆ ಕನಿಷ್ಟ 7 ದಿನ ಕಾಲಾವಕಾಶಕ್ಕೆ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಎರಡು ಸಾವಿರಕ್ಕೂ ಹೆಚ್ಚಿನ ದಾಖಲೆಗಳನ್ನು ವಕೀಲರು ಪರಿಶೀಲಿಸಬೇಕಿದೆ. ಆದರೆ ಸೂಕ್ತ ವಕೀಲರು ಸಿಗುತ್ತಿಲ್ಲವಾದ್ದರಿಂದ ಸ್ವಲ್ಪ ಸಮಯ ಬೇಕು ಎಂದು ಭವಾನಿ ರೇವಣ್ಣ ಪರ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ವಾದ ಮಂಡಿಸಿದ್ದಾರೆ.

ಭವಾನಿ ಪರ ವಕೀಲರ ವಾದಕ್ಕೆ ಎಸ್ ಪಿಪಿ ಪ್ರೊ. ರವಿವರ್ಮ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭವಾನಿ ರೇವಣ್ಣ ಅವರು ಕೂಡ ಸ್ವತಃ ಆರೋಪಿಯಾಗಿದ್ದು. ಈ ಕೇಸಿಗೆ 3 ನೇ ವ್ಯಕ್ತಿ ಆಗಿದ್ದಾರೆ.  ಇಂದು ಸಾಕ್ಷಿಯ ಹೇಳಿಕೆ ದಾಖಲಾಗಬಾರದೆಂದು ಈ ರೀತಿ ಡ್ರಾಮಾ ಮಾಡುತ್ತಿದ್ದಾರೆ ಎಂದು ಎಸ್​ಪಿಪಿ ನ್ಯಾಯಾಲಕ್ಕೆ ತಿಳಿಸಿದ್ರು.

ಈ ರೀತಿಯ ಅರ್ಜಿಗಳನ್ನು ಸಲ್ಲಿಸಿ ಕೋರ್ಟ್​ಗೆ ವಂಚಿಸುತ್ತಿದ್ದಾರೆ. ಭವಾನಿ ರೇವಣ್ಣ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್​ ದಾಖಲಿಸಬೇಕು ಎಂದು ಎಸ್​ಪಿಪಿ ರವಿವರ್ಮ ಕುಮಾರ್ ಗುಡುಗಿದ್ರು. ಬಳಿಕ ಇಂದೇ ವಕೀಲರ ನೇಮಕ ಸಾಧ್ಯವೇ ಎಂದು ತಿಳಿಸಲು ಹೈಕೋರ್ಟ್ ಸೂಚನೆ ನೀಡಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕೊನೆಗೂ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲು ಮುಂದಾಗಿದ್ದಾರೆ. ಇನ್ ಕ್ಯಾಮರಾ ಪ್ರೊಸಿಡಿಂಗ್ಸ್‌ ನಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲು ಮಾಡಲಾಗುತ್ತಿದೆ. ಆರೋಪಿ ಪ್ರಜ್ವಲ್ ರೇವಣ್ಣ ಕೂಡ ಕೋರ್ಟ್‌ನಲ್ಲಿ ಹಾಜರಾಗಿದ್ದಾರೆ

ಸಂತ್ರಸ್ತೆಯ ಹೇಳಿಕೆ ದಾಖಲು ಮಾಡದಂತೆ ಪ್ರಜ್ವಲ್ ಕಾನೂನು ಹೋರಾಟ ನಡೆಸಿದ್ದರು. ಅಂತಿಮವಾಗಿ ಉಚಿತ ಕಾನೂನು ಸೇವೆ ವಕೀಲರು ಪ್ರಜ್ವಲ್ ಪರ ಹಾಜರಾಗಿದ್ದಾರೆ. DLSA ಇಂದ ವಕೀಲೆ ಜಯಶ್ರೀ ಪ್ರಜ್ವಲ್ ಪರ ಹಾಜರಾಗಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಂತ್ರಸ್ತೆ ಹೇಳಿಕೆ ದಾಖಲಿಸುತ್ತಿದ್ದಾರೆ.

No Ads
No Reviews
No Ads

Popular News

No Post Categories
Sidebar Banner
Sidebar Banner