ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರರ ಅಡಗು ತಾಣಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದೆ. ಇದಕ್ಕೆ ಕಿಚ್ಚ ಸುದೀಪ್ ಅವರು ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಸೇನೆಯ ಕ್ರಮದ ಬಗ್ಗೆ ಅವರು ಶ್ಲಾಘನೆ ಹೊರಹಾಕಿದ್ದಾರೆ. ಈ ಮೊದಲು ‘ಪಹಲ್ಗಾಮ್’ ದಾಳಿ ಆದಾಗ ಸುದೀಪ್ ಸಂತಾಪ ಸೂಚಿಸಿದ್ದರು.
ಸಿಂಧೂರ ಆಪರೇಷನ್ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್, ‘ಓರ್ವ ಭಾರತೀಯನಾಗಿ, ಈ ಪವಿತ್ರ ಭೂಮಿಯ ಮಗನಾಗಿ ಪಹಲ್ಗಾಮ್ನಲ್ಲಿ ನಡೆದ ಘಟನೆ ನನಗೆ ನೋವನ್ನು ತಂದಿತ್ತು. ಇಂದು ನನಗೆ ನ್ಯಾಯ ಸಿಕ್ಕಂತೆ ಅನಿಸುತ್ತಿದೆ. ಆಪರೇಷನ್ ಸಿಂಧೂರ: ಕೇವಲ ಒಂದು ಧ್ಯೇಯವಲ್ಲ, ಬದಲಾಗಿ ಒಂದು ಪವಿತ್ರ ಪ್ರತಿಜ್ಞೆ’ ಎಂದು ಸುದೀಪ್ ಹೇಳಿದ್ದಾರೆ.
‘ಭಾರತದ ಸಿಂಧೂರ ಮತ್ತೆ ನಮಗೆ ಸಿಕ್ಕಿದೆ. ನಮ್ಮ ಧೈರ್ಯಶಾಲಿಗಳು (ಯೋಧರು) ಸಿಂಧೂರದ ಗೌರವವನ್ನು ಬೆಂಕಿ ಮತ್ತು ನಿಖರತೆಯೊಂದಿಗೆ ಮತ್ತೆ ತಂದಿದ್ದಾರೆ. ನಮ್ಮ ಸಶಸ್ತ್ರ ಪಡೆಗಳಿಗೆ ಅನಂತ ವಂದನೆಗಳು. ದೃಢವಾಗಿ ಮತ್ತು ನಿರ್ಭೀತವಾಗಿ ನಿಂತ ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ಇಲಾಖೆಗೆ ಧನ್ಯವಾದ. ಭಾರತ ಮರೆಯುವುದಿಲ್ಲ, ಭಾರತ ಕ್ಷಮಿಸುವುದಿಲ್ಲ’ ಎಂದು ಸುದೀಪ್ ಹೇಳಿದ್ದಾರೆ.
Log in to write reviews