No Ads

ಸುಹಾಸ್ ಶೆಟ್ಟಿ ಹತ್ಯೆ; 'ರಿವೇಂಜ್ ಸೂನ್', 'ಫಿನಿಷ್' ಮೊದಲಾದ ಪ್ರಚೋದನಕಾರಿ ಪೋಸ್ಟ್

ಕರ್ನಾಟಕ 2025-05-02 12:59:15 778
post

ಮಂಗಳೂರಿನ ಬಜಪೆಯಲ್ಲಿ ಗುರುವಾರ ರಾತ್ರಿ ಕೊಲೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯ ಬೆನ್ನಲ್ಲೇ ಪ್ರಚೋದನಕಾರಿ ಪೋಸ್ಟ್‌ಗಳು ಇನ್‌ಸ್ಟಾಗ್ರಾಮ್‌ನಲ್ಲಿ ಕಾಣಿಸಿಕೊಂಡಿವೆ. 'Troll_mayadiaka' ಎಂಬ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಸುಹಾಸ್‌ ಶೆಟ್ಟಿ ಫೋಟೋ ಹಾಕಿ 'ಫಿನಿಶ್‌' ಎಂದು ಪೋಸ್ಟ್ ಮಾಡಲಾಗಿದೆ. ಅಲ್ಲದೆ 'ಮುಂದಿನ ವಿಕೆಟ್‌ಗಾಗಿ ಕಾಯುತ್ತಿದ್ದೇವೆ' ಎಂಬ ಸಂದೇಶವನ್ನೂ ಹಾಕಲಾಗಿದೆ.

ಅಲ್ಲದೆ, ಸುಹಾಸ್‌ ಶೆಟ್ಟಿಯನ್ನು ನಡು ರಸ್ತೆಯಲ್ಲಿ ಕೊಚ್ಚಿ ಕೊಲ್ಲುವ ವಿಡಿಯೋವನ್ನು ಸಹ ಪೋಸ್ಟ್ ಮಾಡಿ ಸಂಭ್ರಮಿಸಲಾಗಿದೆ. ಹಲವು ಇನ್‌ಸ್ಟಾಗ್ರಾಮ್‌ ಪೇಜ್‌ಗಳಲ್ಲಿ ಈ ರೀತಿಯ ಪೋಸ್ಟ್‌ಗಳು ಹರಿದಾಡುತ್ತಿವೆ.

ಮಂಗಳೂರಿನ ಬಜಪೆಯಲ್ಲಿ ಈ ಕೊಲೆ ನಡೆದಿದ್ದು, ಮಾರ್ಚ್ 31ರಂದೇ ಸುಹಾಸ್ ಶೆಟ್ಟಿ ಕೊಲೆಗೆ ಸ್ಕೆಚ್ ಹಾಕಲಾಗಿತ್ತು ಎಂದು ತಿಳಿದುಬಂದಿದೆ. ಮಾರ್ಚ್ 31ರಂದು ಸುಹಾಸ್ ಶೆಟ್ಟಿ ಅವರ ಫೋಟೋ ಹಾಕಿ 'ರಿವೇಂಜ್ ಸೂನ್' ಎಂದು ಟಾರ್ಗೆಟ್ ಕಿಲ್ಲರ್_03 ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್ ಮಾಡಲಾಗಿತ್ತು.

ಅಂದರೆ, ಕೊಲೆ ಮಾಡುವ ಮುಂಚೆಯೇ ಸುಳಿವು ನೀಡಲಾಗಿತ್ತು. 'ರಿವೇಂಜ್ ಸೂನ್' ಎಂದು ಶೀಘ್ರದಲ್ಲೇ ಸೇಡು ತೀರಿಸಿಕೊಳ್ಳುತ್ತೇವೆ ಎನ್ನುವ ಅರ್ಥದಲ್ಲಿ ಎಚ್ಚರಿಕೆ ನೀಡಲಾಗಿತ್ತು.

ಈ ಪೋಸ್ಟ್‌ಗಳು ಮಂಗಳೂರಿನಿಂದಲೇ ಆಪರೇಟ್ ಆಗುತ್ತಿವೆ ಎಂದು ಹೇಳಲಾಗುತ್ತಿದ್ದು, ಕೊಲೆ ನಡೆದ ತಕ್ಷಣ ಈ ರೀತಿಯ ಪೋಸ್ಟ್‌ಗಳು ಕಾಣಿಸಿಕೊಂಡಿರುವುದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ. ಅದರಲ್ಲೂ 'ನೆಕ್ಸ್ಟ್ ಟಾರ್ಗೆಟ್' ಎಂದು ಪೋಸ್ಟ್ ಮಾಡಿರುವುದು ಮುಂದಿನ ಗುರಿ ಯಾರು ಎಂಬ ಭಯವನ್ನು ಹುಟ್ಟುಹಾಕಿದೆ.

ಸುರತ್ಕಲ್‌ನಲ್ಲಿ 2022ರ ಜುಲೈ 26ರಂದು ನಡೆದ ಮೊಹಮ್ಮದ್‌ ಫಾಝಿಲ್‌

ಕೊಲೆ ಪ್ರಕರಣದ ಆರೋಪಿ, ರೌಡಿಶೀಟರ್‌ ಹಾಗೂ ಕಾಟಿಪಳ್ಳ- ಕೋಡಿಕೆರೆ ನಿವಾಸಿ 42 ವರ್ಷದ ಸುಹಾಸ್‌ ಶೆಟ್ಟಿಯನ್ನು ತಂಡವೊಂದು ಬೆನ್ನಟ್ಟಿ ಭೀಕರವಾಗಿ ಕೊಲೆಗೈದಿದೆ. ಗುರುವಾರ ರಾತ್ರಿ ಬಜಪೆ ಕಿನ್ನಿಪದವು ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಫಾಝಿಲ್‌ ಕೊಲೆ ಪ್ರಕರಣದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಸುಹಾಸ್‌ ಜಾಮೀನು ಪಡೆದು ಬಿಡುಗಡೆಗೊಂಡಿದ್ದ. ಗುರುವಾರ ರಾತ್ರಿ ಯಾವುದೋ ಕೆಲಸ ನಿಮಿತ್ತ ಬಜಪೆ ಕಡೆ ಕಾರಿನಲ್ಲಿ ತೆರಳುತ್ತಿದ್ದಾಗ ಕಾರು ಮತ್ತು ಒಂದು ಮೀನಿನ ಗಾಡಿಯಲ್ಲಿ 4 ಮಂದಿ ದುಷ್ಕರ್ಮಿಗಳ ಗುಂಪು ಬೆನ್ನಟ್ಟಿಕೊಂಡು ಬಂದು ಹತ್ಯೆ ಮಾಡಿತ್ತು.

ತನ್ನನ್ನು ಫಾಲೋ ಮಾಡುತ್ತಿರುವುದು ಗೊತ್ತಾಗುತ್ತಿದ್ದಂತೆ ಸುಹಾಸ್‌ ತಪ್ಪಿಸಲು ಪ್ರಯತ್ನಪಟ್ಟು ಕಿನ್ನಿಪದವು ಜಂಕ್ಷನ್‌ನಲ್ಲಿ ಇರುವ ಸಲೂನ್‌ ಒಂದಕ್ಕೆ ತನ್ನ ಕಾರನ್ನು ನುಗ್ಗಿಸಿದ್ದ. ಈ ವೇಳೆ ದುಷ್ಕರ್ಮಿಗಳು ಕೂಡಾ ಕಾರು ಮತ್ತು ಮೀನಿನ ಟೆಂಪೋವನ್ನು ಸಲೂನ್‌ ಒಳಗೆ ನುಗ್ಗಿಸಿ, ಬಳಿಕ ಸುಹಾಸ್‌ನನ್ನು ಹೊರಗೆ ಎಳೆದು ಹಾಕಿ ತಲವಾರಿನಿಂದ ಭೀಕರವಾಗಿ ಕಡಿದು ಕೊಲೆ ಮಾಡಿದ್ದಾರೆ.

ಈ ಘಟನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಶುಕ್ರವಾರ ಮಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಸರಕಾರ ಕೂಡ ಕ್ಷಿಪ್ರವಾಗಿ ಕಾರ್ಯಪ್ರವೃತ್ತವಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ನೇಮಕ ಮಾಡಿದೆ.

No Ads
No Reviews
No Ads

Popular News

No Post Categories
Sidebar Banner
Sidebar Banner